ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ — ರೇಖಾ ನವೀನ್.
ತರೀಕೆರೆ ಜುಲೈ.29
ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡ ಅಪೂರ್ಣವಾಗಿದೆ ನನ್ನ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಬೇಕೆಂದು ನನ್ನ ಬಯಕೆ ಎಂದು ಕರೆಗುಚ್ಚಿ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ರೇಖಾ ನವೀನ್ ರವರು ಇಂದು ಕರುಕುಚ್ಚಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಿಗೂ ಸಹ ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ. ಕರಕುಚ್ಚಿ ಗ್ರಾಮದಲ್ಲಿ ಎರಡು ಬೀದಿಗಳಿಗೂ ಸಿಸಿ ಚರಂಡಿಗಳನ್ನು ಮಾಡಿಸಬೇಕಾಗಿದೆ, ಮತ್ತು ಸಿಸಿ ರಸ್ತೆಗಳನ್ನು ಮಾಡಿಸಲಾಗಿದೆ. ಪ್ರತಿ ಗ್ರಾಮಗಳಿಗೂ ಸಹ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು. ಮತ್ತು ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಲ್ಲಿಯೂ ಸಹ ಶುದ್ಧೀಕರಿಸಿದ ಕುಡಿಯುವ ನೀರು, ಪ್ರತಿ ಮನೆಮನೆಗೂ ಒದಗಿಸಲಾಗುವುದು ಎಂದು ಹೇಳಿದರು. ಚುನಾವಣಾ ಅಧಿಕಾರಿಯಾಗಿ ಶಿವರಾಜ್ ಕುಮಾರ್ ಸಹಾಯಕ ನಿರ್ದೇಶಕರು ಕೃಷಿ ಇಲಾಖೆಯವರು ಫಲಿತಾಂಶವನ್ನು ಘೋಷಣೆ ಮಾಡಿದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ