ಮಹಾರಾಷ್ಟ್ರ ಬಸ್​ ಸಂಚಾರ ಸ್ಥಗಿತ, ಕರ್ನಾಟಕ ಸರ್ಕಾರದ ವಿರುದ್ಧ ಮಹಾರಾಷ್ಟ್ರ ಕನ್ನಡಿಗರ ಬೇಸರ

ಬೆಳಗಾವಿಯಲ್ಲಿ ಕನ್ನಡಿಗರ ಆಕ್ರೋಶದ ಕಿಚ್ಚು ಹೆಚ್ಚಾಗುತ್ತಲೇ ಇದೆ. ಇಂದು ಕೂಡ ಕರವೇ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ.

LIVE NEWS & UPDATES

07 Dec 2022 12:46 PM (IST)

Karnataka Maharashtra Border Dispute Live: ಮಹಾರಾಷ್ಟ್ರದವರು ಏನು ಬೇಕಾದರೂ ಮಾತನಾಡಲಿ, ನಾವು ಸಂಯಮದಿಂದ ಇರೋಣ

ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರ ಸಂಬಂಧ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಮಹಾರಾಷ್ಟ್ರದವರು ಏನು ಬೇಕಾದರೂ ಮಾತನಾಡಲಿ. ನಾವು ಸಂಯಮದಿಂದ ಇರೋಣ. ನೆಲ, ಜಲ, ಭಾಷೆ ಹಿತಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಮಹಾರಾಷ್ಟ್ರ ಸರ್ಕಾರ ಜೊತೆ ನಮ್ಮ ಸಿಎಂ ಸಹ ಮಾತನಾಡಿದ್ದಾರೆ. 2 ರಾಜ್ಯಗಳ ಸಿಎಸ್​, ಪೊಲೀಸ್ ಅಧಿಕಾರಿಗಳ ಜತೆ ಸಭೆ ಮಾಡಿದ್ದೇವೆ. ನಾವು ಮಾತಿನಲ್ಲಿ ತೋರಿಸಲ್ಲ, ನಮ್ಮ ನಡವಳಿಕೆಯಲ್ಲಿ ತೋರಿಸ್ತೇವೆ. ಎಲ್ಲಾ ಕಡೆಯೂ ಪೊಲೀಸ್​ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾವ ಸಚಿವರು ಎಲ್ಲಿಗೆ ಬೇಕಾದ್ರೂ ಹೋಗಬಹುದು, ಬರಬಹುದು. ಆದರೆ ಈಗಿರುವ ಪರಿಸ್ಥಿತಿಯಲ್ಲಿ ಬರುವುದು ಸರಿಯಲ್ಲ. ಬೆಳಗಾವಿಗೆ ಬಂದು ಪ್ರಚೋದನೆ ಮಾಡುವ ಅವಶ್ಯಕತೆ ಇಲ್ಲ ಎಂದರು.
07 Dec 2022 12:41 PM (IST)

Karnataka Maharashtra Border Dispute Live: ಗಡಿ ವಿವಾದದಿಂದ ಸಾಮಾನ್ಯ ಜನರಿಗೆ ಸಮಸ್ಯೆ

ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿ ಗಡಿ ವಿವಾದದಿಂದ ಸಾಮಾನ್ಯ ಜನರಿಗೆ ತುಂಬಾ ಸಮಸ್ಯೆ ಆಗ್ತಿದೆ. ಕೂಡಲೇ ಸಿಎಂ ಬೊಮ್ಮಾಯಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಪ್ರತಿದಿನ ಸಾಂಗ್ಲಿ, ಕೊಲ್ಹಾಪುರಕ್ಕೆ ಓಡಾಡಲು ತೊಂದರೆ ಆಗುತ್ತಿದೆ. ರಾಜ್ಯ ಸರ್ಕಾರ ಸರಿಯಾದ ತೀರ್ಮಾನ ತೆಗೆದುಕೊಳ್ಳಬೇಕು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದು ಏನು ಮಾಡುತ್ತಾರೆ? ರಾಜಕೀಯ ಕಾರಣ ಇರಬಹುದು, ಆದ್ರೆ ಹಿಂದೆ ಇದ್ದ ಪರಿಸ್ಥಿತಿ ಬೇರೆ ಎಂದರು.
07 Dec 2022 12:36 PM (IST)

Karnataka Maharashtra Border Dispute Live: ಮಸಿ ಬಳಿದಿರುವುದನ್ನ ಖಂಡಿಸಿ ಕರವೇ ಶಿವರಾಮೇಗೌಡ ಬಣದಿಂದ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗಳಿಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ ಮಸಿ ಬಳಿದಿರುವುದನ್ನ ಖಂಡಿಸಿ ಕರವೇ ಶಿವರಾಮೇಗೌಡ ಬಣದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಳಗಾವಿ ನ್ಯೂ ಸರ್ಕ್ಯೂಟ್ ಹೌಸ್‌ದಿಂದ ಬಸ್ ನಿಲ್ದಾಣದತ್ತ ಪ್ರತಿಭಟನಾ ಮೆರವಣಿಗೆ ಹೊರಟಿದೆ. ಮಹಾರಾಷ್ಟ್ರ ಸರ್ಕಾರ, ಶಿವಸೇನೆ ಪುಂಡರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಲಾಗುತ್ತಿದೆ.
07 Dec 2022 12:34 PM (IST)

Karnataka Maharashtra Border Dispute Live: ಕೇಂದ್ರ ಬಸ್ ನಿಲ್ದಾಣದಲ್ಲಿ 50ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಳಗಾವಿ ನಗರದಲ್ಲಿ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ ಹಿನ್ನೆಲೆ ಕೇಂದ್ರ ಬಸ್ ನಿಲ್ದಾಣದಲ್ಲಿ 1 ಕೆಎಸ್‌ಆರ್‌ಪಿ ತುಕಡಿ ಸೇರಿ 50ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಕನ್ನಡಪರ ಹೋರಾಟಗಾರರು ಬಸ್ ನಿಲ್ದಾಣಕ್ಕೆ ನುಗ್ಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
07 Dec 2022 12:25 PM (IST)

Karnataka Maharashtra Border Dispute Live: ಎಂಇಎಸ್​​ ಕಿಡಿಗೇಡಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ

ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿ ಇಂಧನ ಸಚಿವ ಸುನೀಲ್​ ಕುಮಾರ್​ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಭಾಷೆ, ನೆಲ, ಜಲದ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಶಾಂತಿ ಕದಡುವ ಚಟುವಟಿಕೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಎಂಇಎಸ್​​ ಕಿಡಿಗೇಡಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಕನ್ನಡ ಭಾಷೆ, ಸಂಸ್ಕೃತಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದರು.
07 Dec 2022 12:14 PM (IST)

Karnataka Maharashtra Border Dispute Live: ಮಹಾರಾಷ್ಟ್ರದಲ್ಲಿರುವ ಕರ್ನಾಟಕ ಬ್ಯಾಂಕ್‌ನ ಶಾಖೆಗೆ ಮಸಿ

ಮಹಾರಾಷ್ಟ್ರದ ನಾಸಿಕ್​ನಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದೆ. ಸ್ವರಾಜ್ಯ ಸಂಘಟನೆ ಕಾರ್ಯಕರ್ತರು ಕರ್ನಾಟಕ ಬ್ಯಾಂಕ್‌ಗೆ ಕಪ್ಪು ಮಸಿ ಬಳಿದಿದ್ದಾರೆ. ನಾಸಿಕ್ ನಲ್ಲಿರುವ ಕರ್ನಾಟಕ ಬ್ಯಾಂಕ್‌ನ ಶಾಖೆಯ ಬೋರ್ಡ್‌ ಹಾಗೂ ಬಾಗಿಲಿಗೆ ಕಪ್ಪು ಮಸಿ ಮೆತ್ತಲಾಗಿದೆ. ಕೈಯಲ್ಲಿ ಭಗವಾ ಧ್ವಜ ಹಿಡಿದು ಕರ್ನಾಟಕ‌ ಸರ್ಕಾರದ ವಿರುದ್ಧ ಘೋಷಣೆ‌ ಕೂಗಿ ಕಿಡಿಗೇಡಿಗಳು ಪುಂಡಾಟಿಕೆ ಮೆರೆಯುತ್ತಿದ್ದಾರೆ.
07 Dec 2022 12:03 PM (IST)

Karnataka Maharashtra Border Dispute Live: ಗಡಿ ಭಾಗದಲ್ಲಿ ಪೊಲೀಸ್ ಅಲರ್ಟ್

ಬೆಳಗಾವಿ ಮಹಾರಾಷ್ಟ್ರ ಗಡಿ ವಿವಾದ ಹಿನ್ನಲೆ ಗಡಿ ಭಾಗದಲ್ಲಿ ಪೊಲೀಸರು ಹೈ ಅಲರ್ಟ್ ಕೈಗೊಂಡಿದ್ದಾರೆ. ಬೆಳಗಾವಿ ಬಳಿ ಬಾಚಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಂಡಿದ್ದಾರೆ. ಮಾಹಾರಾಷ್ಟ್ರದಿಂದ ಬರೋ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಅನುಮಾನಾಸ್ಪದವಾಗಿ ಕಂಡು ಬರೋ ವಾಹನಗಳ ತಪಾಸಣೆ ಮಾಡಲಾಗುತ್ತಿದೆ.
07 Dec 2022 11:53 AM (IST)

Karnataka Maharashtra Border Dispute Live: ಜೈ ಭವಾನಿ ಜೈ ಶಿವಾಜಿ ಅಂತಾ ಕೆಎಸ್‌ಆರ್‌ಟಿಸಿ ಬಸ್​ಗಳಿಗೆ ಮಸಿ

ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರು ಮತ್ತೊಂದು ಬಸ್‌ಗೆ ಮಸಿ ಬಳಿದಿದ್ದಾರೆ. ಮಹಾರಾಷ್ಟ್ರದ ಭಾರಾಮತಿಯಲ್ಲಿ ಡಿಪೋಗೆ ನುಗ್ಗಿ ಜೈ ಮಹಾರಾಷ್ಟ್ರ ಅಂತಾ ಮಸಿ ಬಳಿದಿದ್ದಾರೆ. ಈ ಬಗ್ಗೆ ಟಿವಿ9ಗೆ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕ ಭರಮಪ್ಪ ಮಾಹಿತಿ ನೀಡಿದ್ದು, ಶಿವಸೇನೆ ಕಾರ್ಯಕರ್ತರು ಕೈಯಲ್ಲಿ ಬಾವುಟ ಹಿಡಿದುಕೊಂಡು, ಜೈ ಭವಾನಿ ಜೈ ಶಿವಾಜಿ ಅಂತಾ ಬಂದು ಜೈ ಮಹಾರಾಷ್ಟ್ರ ಅಂತಾ ಬಸ್‌ಗೆ ಕಪ್ಪು ಮಸಿ ಬಳಿದ್ರೂ. ಪೊಲೀಸರು ಬರ್ತಾಯಿದ್ದಂತೆ ಎಲ್ಲರೂ ಓಡಿ ಹೋದ್ರೂ‌. ಪೆಟ್ರೋಲ್‌ದಿಂದ ಮಸಿಯನ್ನ ಅಳಸಿಕೊಂಡು ವಾಪಾಸ್ ಆಗಿದ್ದೇವೆ. ಪೊಲೀಸರ ಸಹಾಯದಿಂದ ಬೆಳಗ್ಗೆ ನಾಲ್ಕು ಗಂಟೆಗೆ ಭಾರಾಮತಿ ಬಿಟ್ಟು ಬೆಳಗಾವಿಗೆ ಬಂದಿದ್ದೇವೆ ಎಂದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button